ಬರವಣಿಗೆ, ಒಂದು ಸುಂದರ ಅನುಭವ. ವರ್ಷಗಳೇ ಕಳೆದು ಹೋಗಿತ್ತು, ಮನಸ್ಸಿಟ್ಟು ಬರೆಯದೆ. ನನಗೆ ಬರವಣಿಗೆಯ ಜೊತೆ ಒಂದಿಷ್ಟು ಒಳ ಒಪ್ಪಂದ ಇದೆ. ಯಾವುದೇ ರೀತಿಯ ಹೊರ ಪ್ರಪಂಚದ ಪ್ರಭಾವ ಬೀರದೆ, ಬಹುಮುಖ್ಯವಾಗಿ ಸಾಮಾಜಿಕ ಜಾಲತಾಣ, ಸಿನಿಮಾ, ಯಾರೋ ಬರೆದ ಸಾಲುಗಳು... ಹಾಗಂತ ಮುಖತಃವಾಗಿ ಪರಿಚಯವಾದ ಪ್ರತಿಯೊಂದು ವ್ಯಕ್ತಿ, ಜೀವಿ, ವಸ್ತು, ಸಂಗತಿಗಳಲ್ಲಿ ಜೀವಿಸ ಬಯಸುತ್ತೇನೆ. ಬಹುಶಃ ನಾವು ಜೀವನ ಪೂರ್ತಿ ಯಾವುದೋ ಸಂಕೋಲೆಯ ಸಂತೆಯಲ್ಲಿ ಕಳೆದುಹೋದ ನಮ್ಮನ್ನು ಹುಡುಕುತ್ತಿರುತ್ತೇವೆ. ಅನುಭವದಿಂದ ಮಾಗಿದ ಮನಸ್ಸಿಗೆ ಆ ಹಳೆಯ ನಾವು ಕಂಡರೂ ಕಾಣದಂತೆ ಮಾಡಿ ಹೊಸ ಅಂಗಿ ತೊಟ್ಟ ನಮ್ಮನ್ನೇ ಅಪ್ಪಿಕೊಳ್ಳುವುದು, ಆದರೆ ಹುಡುಕಾಟ ನಿರಂತರ. ಬಹುಶಃ ಈ ಲೌಕಿಕ ಜಗತ್ತಿನಲ್ಲಿ ಇರುವಾಗ, ಇದಕ್ಕೂ ಆಳಕ್ಕಿಳಿದರೆ ಅಪಾಯವೇ ಸರಿ. ನಾನು ಭಗವದ್ಗೀತೆಯಲ್ಲಿ ನಂಬಿದ ಸಾಲುಗಳೆಂದರೆ ನಮಗೆ ಸೇರಬೇಕಾಗಿದ್ದು ನಮಗೆ ಸೇರಿಯೇ ತೀರುವುದು. ಪ್ರಯತ್ನ ಇರಬೇಕು ಅಷ್ಟೇ. ಇದ್ದ ಕೆಲಸ ಬಿಟ್ಟಿದ್ದೆ, ಮುಂದೆ ಏನು ಎಂಬ ಚಿಂತೆ ಮನೆಯಲ್ಲೇ ಬಿಟ್ಟು ಬೀಗ ಹಾಕಿ ಹೊರಟಿದ್ದೆ. ಹೊರಟ ಪಯಣ ಸುಲಭವಿರಲಿಲ್ಲ. ಬಹಳ ದಿನಗಳ ನಂತರ ತಿರುಗಲು ಹೊರಟಿದ್ದೆ. ಕೊನೆಯ ಕ್ಷಣದಲ್ಲಿ ಆದ ಬದಲಾವಣೆಯಿಂದ ಮನೆಯಿಂದ ಹೊರ ಬೀಳಲು ಮನಸ್ಸಿರಲಿಲ್ಲ. ಪ್ರತಿ ಬಾರಿ ನನ್ನ ಸ್ನೇಹಿತರ ಗುಂಪು ಪ್ರವಾಸದ ಬಗ್ಗೆ ಹೇಳಿದಾಗ ಏನೋ ಕುಂಟು ನೆಪ ಹೇಳಿ ತಪ್ಪಿಸಿಕೊಳ್ಳುವೆ ಎಂಬ ಅಪವಾದ ನನ್ನ ಮೇಲಿತ್ತು. ಈ ಬಾರಿ ಏನು ಯೋಚಿಸ...
- Get link
- X
- Other Apps
ನಮ್ಮೂರ ಕಥೆ #ಮಲೆನಾಡು#
ಈಗ ಹೇಳ ಹೊರಟಿರುವುದು, ಇಂದು ನಿನ್ನೆಯ ಕಥೆಯಲ್ಲ. ಬಹುಶಃ ನಾನು ೯ ನೇ ತರಗತಿಯಲ್ಲಿದ್ದಾಗ ಕಾರಂತರ ಕಾದಂಬರಿ 'ಬೆಟ್ಟದ ಜೀವ'ದ ಒಂದು ತುಣುಕು ಓದುವಾಗ ಯುಕಾಲಿಪ್ಟಸ್(ಅಕೇಶಿಯ) ಸಂತತಿಯ ಬಗೆಗೆ, ಹಾಗೂ ಅಲ್ಲಿ ಪರಿಸರವಾದಿ ನಾಗೇಶ ಹೆಗಡೆಯವರ ಕುರಿತಾಗಿ ಒದಿದ್ದೆ, ನಾನು ಕಾರಂತರ ಪರವಾಗೆ ಉತ್ತರ ಬರೆದು ಪಾಸು ಆದೆ. ಆದರೆ ಈಗ ನೈಜತೆಯ ಅರಿವು ೧೦ ವರ್ಷಗಳ ಅನುಭವದಿಂದ ಆಗಿದೆ. ಪರಿಸರವಾದಿಗಳು ಅಂದರೆ ನಮಗೆಲ್ಲಾ ಅಸಡ್ಡೆ,ಯಾವಾಗಲೂ ಏನಾದರೂ ಒಂದು ವಿಷಯ ಹಿಡಿದು ತಿಕ್ಕುತ್ತಿರುತ್ತಾರೆ ಎಂಬ ಅಭಿಪ್ರಾಯ. ಆದರೆ ಈ ಅಕೇಶಿಯ ಸಂತತಿ ನಿಷೇಧವನ್ನು ಅರಣ್ಯೀಕರಣಕ್ಕೆ ಆಗ್ರಹಿಸುತ್ತಿರುವಲ್ಲಿ ಸತ್ಯತೆ ಇದೆ.ಮೂಲತಃ ಯುಕಾಲಿಪ್ಟಸ್ ಸಂತತಿ ಆಸ್ಟ್ರೇಲಿಯಾದ್ದು. ಬ್ರಿಟಿಷರ ಕಾಲದಲ್ಲಿ ೨೦ ನೇ ಶತಮಾನದ ಆರಂಭದಲ್ಲಿ ಭಾರತಕ್ಕೆ ಕಾಲಿಟ್ಟಿತು. ಖಾಲಿ ಜಾಗಗಳಲ್ಲಿ ಇದನ್ನು ಬೆಳೆಯಲಾರಂಭಿಸಿದರು. ಇದರ ಕಟ್ಟಿಗೆಯನ್ನು ರೈಲಿನ ಹಲಗೆ, ಇದ್ದಿಲು, ಇನ್ನಿತರ ಉಪಕರಣಗಳ ತಯಾರಿಕೆಯಲ್ಲಿ ಬಳಸುತ್ತಿದ್ದರು. ಕ್ರಮೇಣವಾಗಿ ಸ್ವಾತಂತ್ರಾ ನಂತರವು ಇದರ ಬಳಕೆ ಹೆಚ್ಚುತ್ತ ಹೋಯಿತು. ಈಗ ಅರಣ್ಯೀಕರಣದಲ್ಲಿ ಬಳಸುವ ಸಸ್ಯ ಸಂಕುಲದ ಬಹುದೊಡ್ಡ ಪಾಲು ಸುಮಾರು ೨೦%ಕ್ಕೂ ಹೆಚ್ಚು ಅಕೇಶಿಯ ಮರವಂತೆ. ಇದನ್ನು ವಿರೋಧಿಸುವವರಿಗೆ, 'ಇದು ಸಾರಜನಕ ಸ್ಥಿರೀಕರಣ (nitrogen fixation)ದಲ್ಲಿ ಪಾಲ್ಗೊಂಡು ನೆಲದ ಫಲವತ್ತತೆ ಹೆಚ್ಚಿಸುತ್ತದೆ' ಎಂಬ ಘೋಷಣೆ ಹೊರಡಿಸಿ, ಅರಣ್ಯ ಇಲಾಖೆ ಜನ ಸಾಮಾನ್ಯರ ಬಾಯಿ ಮುಚ್ಚಿಸುತ್ತದೆ. ಹಾಗೆ ಹೇಳುವಾಗ ಕಟು ಸತ್ಯಗಳನ್ನು ಮರೆಮಾಚುತ್ತದೆ. ಅಕೇಶಿಯಾದ ಬಹುತೇಕ ಪ್ರಭೇದಗಳು allelopathic reaction ತೋರಿಸುತ್ತವೆ, ಅಂದರೆ ಇದು ಸ್ರವಿಸುವ ರಾಸಾಯನಿಕ ಪದಾರ್ಥದಿಂದಾಗಿ, ತನ್ನ ಸುತ್ತ ಮುತ್ತ ಇನ್ಯಾವ ಗಿಡ ಮರ ಬೆಳೆಯಗೊಡುವುದಿಲ್ಲ. ಇದರಿಂದ ಅಲ್ಲಿಯ ಸಸ್ಯ ಪ್ರಭೆದ ನಿಧಾನಗತಿಯಲ್ಲಿ ನಶಿಸುತ್ತಿದೆ. ಇದರ ಕುಸುಮಗಳು ಉಸಿರಾಟದ ತೊಂದರೆಯನ್ನು ಉಂಟುಮಾಡಿರು ದಾಖಲೆಗಳಿವೆ. ಬೇರುಗಳು ಆಳಕ್ಕಿಳಿವುದರ ಜೊತೆಗೆ, ಬೆಳವಣಿಗೆಯ ದರ ಹೆಚ್ಚಿರುವ ಕಾರಣ ಅರಣ್ಯ ಇಲಾಖೆಯವರಿಗೆ ಬೆಳೆಸಲು ಸುಲಭ ಎಂಬ ಅಂಶವನ್ನು ಹೊರತುಪಡಿಸಿ, ಉಳಿದೆಲ್ಲಾ ವಿಷಯಗಳು ನಕಾರಾತ್ಮಕವಾಗಿಯೇ ಇದೆ.
ಮೊದಲು ಹಚ್ಚ-ಹಸಿರಿನಿಂದ ಕಂಗೊಳಿಸುತ್ತಿದ್ದ ಮಲೆನಾಡು, ಬಯಲಾಗುತ್ತಿದೆ. ಅಂತರ್ಜಲ ಮಟ್ಟ ಕುಸಿದಿದೆ, ಹೆಚ್ಚಿದ ನೆಲದ ಆಮ್ಲೀಯತೆ, ಗದ್ದೆ ತೋಟಗಳ ತುಂಬ ವಾನರಸೇನೆ, ಇದೆಲ್ಲದ್ದಕ್ಕೂ ಕಾರಣ ಪರೋಕ್ಷವಾಗಿ ಅರಣ್ಯ ಇಲಾಖೆ. ಇಷ್ಟು ವರ್ಷಗಳ ಪರಿಣಾಮ ನೋಡಿಯೂ ಬುದ್ದಿ ಬಂದಿಲ್ಲ.೮೦ವರ್ಷಕ್ಕೂ ಹೆಚ್ಚಿನ ಅವಧಿಯ ಪರೀಕ್ಷಾ ವರದಿ ಸಾಕಾಗಿಲ್ಲವೋ, ಏನೋ... ಈಗಲೂ ಅದೆ ಗಿಡಗಳನ್ನು ಮನೆಬಾಗಿಲಿಗೆ ಹೊತ್ತು ತರುತ್ತಿದೆ.
ನನ್ನ ಪ್ರಕಾರ ಮಲೆನಾಡಿನಲ್ಲಿ ಅರಣ್ಯೀಕರಣಕ್ಕೆ ಮಾನವರ ಮೂಗು ತೂರುವಿಕೆಯ ಅಗತ್ಯವಿಲ್ಲ. ಕಾಡು ತನ್ನಿಂದ ತಾನೆ ಬೆಳೆಯುವುದು, ನಮ್ಮ ಅವಶ್ಯಕತೆ ಅದಕ್ಕಿಲ್ಲ. ನಾನು ಸ್ವತಃ ನೋಡಿಯೇ ಹೇಳುತ್ತಿರುವುದು, ಕಳೆದ ಕೆಲ ವರ್ಷಗಳಿಂದ ಅಕೇಶಿಯ ಮರ ಇರದ ಕಡೆಯೆಲ್ಲ ಕಾಡು ದಟ್ಟವಾಗುತ್ತಿದೆ. ಎಲ್ಲಿ ಜೀವ ವೈವಿಧ್ಯತೆ ಅಳಿಯುತ್ತಿದೆಯೋ ಅಲ್ಲಿ ಅವಶ್ಯಕತೆ ಇದೆ.
ನನ್ನ ಪ್ರಕಾರ ಮಲೆನಾಡಿನಲ್ಲಿ ಅರಣ್ಯೀಕರಣಕ್ಕೆ ಮಾನವರ ಮೂಗು ತೂರುವಿಕೆಯ ಅಗತ್ಯವಿಲ್ಲ. ಕಾಡು ತನ್ನಿಂದ ತಾನೆ ಬೆಳೆಯುವುದು, ನಮ್ಮ ಅವಶ್ಯಕತೆ ಅದಕ್ಕಿಲ್ಲ. ನಾನು ಸ್ವತಃ ನೋಡಿಯೇ ಹೇಳುತ್ತಿರುವುದು, ಕಳೆದ ಕೆಲ ವರ್ಷಗಳಿಂದ ಅಕೇಶಿಯ ಮರ ಇರದ ಕಡೆಯೆಲ್ಲ ಕಾಡು ದಟ್ಟವಾಗುತ್ತಿದೆ. ಎಲ್ಲಿ ಜೀವ ವೈವಿಧ್ಯತೆ ಅಳಿಯುತ್ತಿದೆಯೋ ಅಲ್ಲಿ ಅವಶ್ಯಕತೆ ಇದೆ.
ಅರಣ್ಯದ ಬಗ್ಗೆ ಅರಣ್ಯ ಇಲಾಖೆಗೆ ಅಷ್ಟು ಕಳಕಳಿ ಇದ್ದಿದ್ದೆ ಹೌದಾದಾರೆ
*ಅರಣ್ಯ ಲೂಟಿ ತಡೆಯಲಿ
*ಅರಣ್ಯ ಮಧ್ಯೆ ತಲೆಎತ್ತುತ್ತಿರುವ ರೆಸಾರ್ಟ್ ಗಳನ್ನ ಮುಚ್ಚಲಿ
*ಹೂ ಹಣ್ಣು ಕೊಡುವ, ಅಲ್ಲಿಯದೇ ತಳಿಗಳ ಅಭಿವೃದ್ಧಿಗೆ ವತ್ತು ನೀಡಲಿ
#ಇನ್ನೂ ಇತ್ಯರ್ಥವಾಗದ ಹಳೆಯ ಸಂಗತಿ#
*ಅರಣ್ಯ ಲೂಟಿ ತಡೆಯಲಿ
*ಅರಣ್ಯ ಮಧ್ಯೆ ತಲೆಎತ್ತುತ್ತಿರುವ ರೆಸಾರ್ಟ್ ಗಳನ್ನ ಮುಚ್ಚಲಿ
*ಹೂ ಹಣ್ಣು ಕೊಡುವ, ಅಲ್ಲಿಯದೇ ತಳಿಗಳ ಅಭಿವೃದ್ಧಿಗೆ ವತ್ತು ನೀಡಲಿ
#ಇನ್ನೂ ಇತ್ಯರ್ಥವಾಗದ ಹಳೆಯ ಸಂಗತಿ#
ರಾಧೆ...
🎶
- Get link
- X
- Other Apps
Popular posts from this blog
ನೀವು ಓದುತ್ತಿರುವುದು AIR memory ನನಗೆ ರೇಡಿಯೋ, ನಂಟು ಬಹಳ ಹಳೆಯದು. ಒಂದು ರೀತಿಯ ಸಂಗಾತಿ, ನನ್ನ ಪ್ರಪಂಚವಾಗಿತ್ತು ಎಂದರೂ ಅತಿಶಯವಾಗದೇನೋ... ಆದರೆ ನಂಟು ತೊರೆದು ಸುಮಾರು ಹತ್ತು ವರ್ಷಗಳೇ ಕಳೆದಿದೆ, ಮತ್ತೆ ಕೆಲ ಭಾವಗೀತೆಗಳು ಆಗಾಗ ಅಲ್ಲಿ ಕೊಂಡೊಯ್ಯುತ್ತವೆ ಕ್ಷಣಕಾಲಕ್ಕೆ. ರೇಡಿಯೋ ಜೊತೆ ಕಳೆದ ನೆನಪುಗಳು ಹುಟ್ಟೂರಿನಂತೆ, ಮನಕೆ ತಂಪು, ಈ FM ಗಳನ್ನ ಕೇಳುವಾಗ ಹೋಟೆಲ್ನಲ್ಲಿ ಊಟಮಾಡಿದ ಹಾಗೆ, ಕೇಳುವಾಗ ಹಾಯ್ ಎನಿಸಿದರೂ, ಏನೋ ಅತೃಪ್ತಿ. ನಮ್ಮ ಸಂಬಂಧ ಎಲ್ಲಿಂದ ಶುರುವಾಯಿತು ಎಂದು ನೆನಪಿಲ್ಲ, ಆದರೆ ಒಂದು ಘಟನೆ ಅಮ್ಮ ಯಾವಾಗಲೂ ನೆನಪಿಸಿಕೊಂಡು ನಗುತ್ತಿರುತ್ತಾಳೆ. ಒಮ್ಮೆ ನನ್ನನ್ನ-ಅಣ್ಣನ್ನ ಮನೆಯಲ್ಲಿ ಬಿಟ್ಟು ಊರಲ್ಲಿ ಇರುವ ಪೂಜೆಗೆ ಮನೆಯವರೆಲ್ಲ ಹೋಗಿದ್ದರು. ನನಗೆ ಕುಡಿಯಲು ಕಷಾಯ ಮಾಡಿ ಹೇಳಿ ಹೋಗಿದ್ದರು. ನಾನು ಅಣ್ಣ ಸೇರಿ ಅದಕ್ಕೆ ಸ್ನಾನ ಮಾಡಿಸಿ, ಕಷಾಯ ಕುಡಿಸಿ ಮಲಗಿಸಿದ್ದೆವು. ಅಪ್ಪ ಬಂದು cricket score ಎಷ್ಟಾಯ್ತೆಂದು ರೇಡಿಯೋ ಹಚ್ಚಿದ್ದರೆ, ಅದು ಸಾಯಲು ಬಿದ್ದ ಎಮ್ಮೆ ಕರುವಂತೆ ಅರಚುತ್ತಿತ್ತು ಪಾಪ...ಅಪ್ಪನ ಕೋಪ ನೆತ್ತಿಗೇರಿತ್ತು.... ಪಾಪ ಅದು ಮಾತನಾಡುತ್ತೆ, ಹಸಿವಾಗಲ್ವ, ಕೊಳೆ ಆಗತ್ತೆ, ಊರೆಲ್ಲ ಸುತ್ತುತ್ತೆ ಅಪ್ಪ ಚಿಕ್ಕಪ್ಪರ ಜೊತೆ. ನಾವು ಮಾಡಿದ್ದು ತಪ್ಪಲ್ಲ ಅನ್ನಿಸಿತ್ತು... ಹೀಗೆ ಒಂದು ಬಲಿಯೊಂದಿಗೆ ಪ್ರಾರಂಭವಾಯಿತು, ಆಗ ನನಗೆ ೪ ವರ್ಷವೇನೋ... ಬಳಿಕ ಸುಮಾರು ವರ್ಷ ರೇಡಿಯೋ ಬರಿ ...
ಕಸದ ಬುಟ್ಟಿ ಸೇರುವ ಮುನ್ನ...... ಬಹಳ ದಿನಗಳಿಂದ ಯಾಕೋ ನಮ್ಮ ಈ ಸ್ನೇಹ ಪ್ರೀತಿಯಾಗಿ ತಿರುಗುವ ಎಲ್ಲಾ ಲಕ್ಷಣಗಳು ಕಾಣಬರುತ್ತಿತ್ತು. ಎಷ್ಟೋ ವರ್ಷಗಳ ಕನಸು ನನಸಾಗುವ ಸಮಯ. ಏನೋ ಭಯ, ಕಾತರ... ಅಣ್ಣನಿಗೆ ಫೋನಾಯಿಸಿದೆ. 'ನಿಂಗೆ ಇಷ್ಟಾನಾ ಪುಟ್ಟಾ ' ಎಂದು ಕೇಳಿದ. 'ಗೊತ್ತಿಲ್ಲಾ' ಎಂದೆ ಪೆಚ್ಚಗೆ. 'ಸರಿ ಹೋಯ್ತು..... ಟೈಮ್ ತಗೋ ,ಯೋಚಿಸು ' ಎಂದು ಫೋನಿಟ್ಟ. ಏನು ಯೋಚಿಸಲಿ .... ಮೊದಲ ಬಾರಿಗೆ ಪ್ರೀತಿಯಲ್ಲಿ ಬೀಳುತ್ತಿದ್ದೆ. ಸಹಜವಾಗಿ ಭಾವೊದ್ರಕಕ್ಕೆ ಒಳಗಾಗಿದ್ದೆ. ಪ್ರತಿ ಮೆಸೇಜಿಗೂ ಚಾತಕ ಪಕ್ಷಿಯಂತೆ ಕಾಯುತ್ತಿದ್ದೆ. ಆದರೂ ಕಷ್ಟಪಟ್ಟು ನನಗೆ ನಾನೆ ಬೇಲಿ ಹಾಕಿ ಕೊಂಡಿದ್ದೆ. ಅವನಿಗೆ ಬೇಸರ ಪಡಿಸುವ ಉದ್ದೇಶ ನನಗಿರಲಿಲ್ಲ, ಆದ್ದ ಕಾರಣ ತಡೆದಾದರು ಪ್ರತಿಕ್ರಿಯಿಸುತ್ತಿದ್ದೆ. ಅವನು ಬೇರೆ ತನ್ನ ವೃತ್ತಿರಂಗದಲ್ಲಿ ಮುಂದುವರಿಯುತ್ತಿದ್ದ ಸಮಯವದು. ಸಧ್ಯದಲ್ಲೆ ಬಹುಮುಖ್ಯವಾದ ನಿರ್ಧಾರ ತೆಗೆದುಕೊಳ್ಳುವವನಿದ್ದ. ಅದರ ಖುಷಿಗೆ ಅಡ್ದಿಪಡಿಸುವ ಬಯಕೆ ನನಗಿರಲಿಲ್ಲ. ಏಕೆಂದರೆ ಅವನ ಪರಿಶ್ರಮದ ಅರಿವು ನನಗಿತ್ತು. ಒಮ್ಮೆಅವನ ಜೊತೆ ನನ್ನ ಭವಿಷ್ಯವನ್ನು ಕಲ್ಪಿಸಿಕೊಂಡೆ, ನಾನು ನನ್ನ ಕನಸಿನ ಅರಮನೆಯಲ್ಲಿರುವಂತೆ ಭಾಸವಯಿತು. ತುಂಬಿದ ಮನೆ, ಪ್ರೀತಿ ತುಂಬಿದ ಮಾತುಗಳು... ಬಹುಮುಖ್ಯವಾಗಿ ಎಲ್ಲರೂ ಪರಿಚಿತರು. ನಾನೆಂದರೆ ಅಕ್ಕರೆ-ಪ್ರೀತಿ ಎಂಬುದನ್ನ ಅವರ ಕಂಗಳೆ ಹೇಳಿದ್ದವು. ಇನ್ನೇನು ಬೇಕು. ನಾನು ನ...
ನಾಗರ ಪಂಚಮಿ ಎಂದರೆ ಚಿಕ್ಕಂದಿನಲ್ಲಿ ಒಂದು ವಿಧವಾದ ಹುಚ್ಚು. ಅಮ್ಮ ನಾಗರ ಪಂಚಮಿಗೆ ಇಂತಿಷ್ಟು ದಿನ ಇದೆ ಎಂದು ಲೆಕ್ಕ ಹಾಕ ತೊಡಗಿದರೆ, ನಾನು ಮದರಂಗಿ ಗಿಡ ಎಷ್ಟು ಚಿಗುರಿದೆ, ಎಷ್ಟು ಎಲೆ ಸಿಗಬಹುದು ಎಂದು ಲೆಕ್ಕ ಹಾಕುತ್ತಿದ್ದೆ. ಯಾಕೆಂದರೆ ಆ ದಿನ ಮಾತ್ರ ನನಗೆ ಮದರಂಗಿ ಹಚ್ಚಲು ಅಪ್ಪ ಅಮ್ಮನಿಂದ ಅನುಮತಿ ಸಿಗುತ್ತಿದ್ದುದು. ಚಿಕ್ಕವಳಿದ್ದಾಗ ನಾನಗೂ ಮದರಂಗಿಗು ವಿಚಿತ್ರ ಸಂಬಂಧ. ಅದು ಹಚ್ಚಿ ಕೈ ರಂಗೇರುತ್ತಿದ್ದಂತೆ ಜ್ವರದ ತಾಪ ಹೆಚ್ಚುತ್ತಿತ್ತು. ಬಿಡದೆ ಸುರಿವ ಮಳೆಗಾಲ ಕಾರಣವೋ, ಕಾಕತಾಳೀಯವೋ ಅಥವಾ ನಿಜವೋ ಜ್ವರವಂತು ಬರುತ್ತಿತ್ತು. ಅಪ್ಪ 'ಯಾಕೆ ಬೇಡ ಎಂದರು ಹಚ್ಚುವೆ' ಎಂದು ಗದರುತ್ತಿದ್ದರು. ನಾಗರ ಪಂಚಮಿ ದಿನ ನಾನು ಶಾಲೆ ಬಿಟ್ಟು ಬಂದ ತಕ್ಷಣ ಅಮ್ಮ ಎಷ್ಟೊತ್ತಿಗೆ ಮದರಂಗಿ ಅರೆದು ಕೊಡುವಳು ಎಂದು ಕಾಯುತ್ತಿದ್ದೆ. ಅವಳು ಹಾಲು ಕರೆದು ಬರುವಷ್ಟರಲ್ಲಿ ಒಳ್ಳಲ್ಲಿ ಹಾಕಿ ನನ್ನ ಕೈಗೆ ತಾಗದಂತೆ ಬೀಸುವ ಸರ್ಕಸ್ ಮಾಡುತ್ತಿದ್ದೆ. ಅಮ್ಮ ಬೀಸಿಟ್ಟಂತೆ ಅದಕ್ಕೆ ಲಿಂಬು ರಸ ಹಾಕಿ ತಿರುವುತ್ತ ಮಾವ ಇನ್ನೂ ಯಾಕೆ ಬಂದಿಲ್ಲ, ಎಂದು ಬಾಗಿಲು ಕಾಯುತ್ತಿದ್ದೆ. ಅಮ್ಮ, 'ಮಳೆ ಜೋರಾಗಿದೆ, ಬರಲ್ವೇನೊ, ನೀ ಒಳಗೆ ಬಾ, ದೀಪ ಹಚ್ಚು' ಎಂದರೆ ನನಗೆ ಬಲವಾದ ನಂಬಿಕೆ ಮಾವನ ಮೇಲೆ, ಆತ ಒಮ್ಮೆಯೂ ತಪ್ಪಿಸಿದವನಲ್ಲ. ಯಾವಾಗಲೂ ಕತ್ತಲು ಮಾಡಿಕೊಂಡು ಆ ಚಳಿಯಲ್ಲೂ ಬೆವರೊರಿಸುತ್ತ 'ಅಯ್ಯೋ ಗದ್ದೆಗೆ ಹೋಗಿದ್ದಿ, ಹೊತ್ತಾಗಿದ್ದೆ ಗೊತ...
ಎಲ್ಲರಿಗೂ ಒಂದೊಂದು ಚಟ ಇರುತ್ತಂತೆ, ಚಟ ಚಟ್ಟ ಹತ್ತಿಸುತ್ತಂತೆ. ನಂಗೇನು ಮಾಡುತ್ತೊ ಗೊತ್ತಿಲ್ಲ. ತಲೆ ಹೊಕ್ಕ ಕಥೆ ಕವನಗಳು ನವಮಾಸ ತುಂಬಿದ ಗರ್ಭದಂತೆ, ಇಂದು ಸಮಯವಿಲ್ಲ ಎಂದರೆ ಹೇಗೆ ಕೇಳೀತು? (ಅ)ಹಿತವಾದ ನೋವು ಮೈ ಮನದ ತುಂಬ. ದಿನನೋಡಿ ಹೆರುವುದೆ....?? ಮನೆಗೆ ಬಣ್ಣ ಬಡಿಯಲೆಂದು ಎಲ್ಲಾ ಸಾಮಾನುಗಳನ್ನು ಮಾಳಿಗೆಗೆ ಸಾಗಿಸುತ್ತಿದ್ದರು. ಜಾನ್ಹವಿ ಕಪಾಟಿನಲ್ಲಿದ್ದ ಬಟ್ಟೆಯ ಗಂಟು ಎತ್ತಿದಳು, ಬಲು ಭಾರ. ಸ್ವಲ್ಪ ಬಟ್ಟೆ ಸರಿಸಿ ನೋಡಿದಳು, ಅವಳ ಊಹೆ ಸರಿಯಾಗಿತ್ತು. ಅಲ್ಲೆ ನಿಂತು ಗಂಟು ಬಿಚ್ಚ ತೊಡಗಿದಳು. ಅಷ್ಟರಲ್ಲಿ ಬಂದ ಅವಳ ಅಮ್ಮ, 'ಮೊದಲು ಹಿಡಿದ ಕೆಲಸ ಮುಗಿಸು, ಆಮೇಲೆ ಇದೆಲ್ಲಾ ಹರಡಿಕೊಂಡು ಕೂರು. ಪೇಂಟ್ ಮಾಡೋರು ಬಂದ್ರೆ ಸುಮ್ಮನೆ ಕೂರಬೇಕಾ??! ' ಅವಸರವರವಾಗಿ ಹೇಳಿ ಹೋದರು. ಹಾ ನಂಗೂ ಗೊತ್ತು!!! ಇದನ್ನ ನೋಡು ಎಂದು ಕುಣಿಯುತ್ತ ಮಾಳಿಗೆ ಹೋದಳು. 'ಇನ್ನೂ ಹುಡುಗಾಟ, ನಿನ್ನೋರಿಗೆಯವರೆಲ್ಲಾ ಮದುವೆ ಆಗಿ ಮಕ್ಕಳ ಮಾಡಿಕೊಂಡಾಯ್ತು' ಹಲುಬ ತೊಡಗಿದರು. 'ಹುಂ ಮುದಿಕಿನು ಆದ್ರು!! ಏನಿಗ... ನಾ ಹೀಗೆ ಇರೋದು', ಆ ಗಂಟನ್ನ ಮೂಲೆಯಲ್ಲಿರಿಸಿ, 'ಸಂಜೆ ಸಿಗ್ತೀನಿ, ಸಿ ಯಾ ಡಾರ್ಲಿಂಗ್!! ಎಂದು flying kiss ಕೊಟ್ಟು ಹೊರ ಬಂದಳು. ತೋಟದಿಂದ ಬಂದ ಜಾನ್ಹವಿ ತಂದೆ ' ಯಪ್ಪಾ ಏನು ಸೆಕೆ,!!!' ಬೆವರೊರಿಸಿ ಕೊಳ್ಳುತ್ತಾ 'ಮಗಳೆ ಏನಾದ್ರು ಕುಡಿಯೊದಕ್ಕೆ ತಗೊ ಬಾ' ಎಂದರು. 'ಅಮ್ಮ ಮ...
ದೂರ ತೀರದ ಮಹತಿ ಬಸ್ಸಿಳಿದು ರೂಡಿಯಂಂತೆ ಸಾವಿತ್ರಮ್ಮನ ಮನೆಗೆ ಹೋದೆ. ಅದೊಂದು ಅಧ್ಬುತ ಜೀವ. ಅವರ ಈ ವಯಸ್ಸಿನ ಹುರುಪು ನಮಗೆ ನಾಚಿಕೆ ತರಿಸುತ್ತದ್ದೆ. ನಮ್ಮ ಮನೆ ಅವರಿಗೆ ಅಜ್ಜನ ಮನೆಯಾಗಬೇಕಂತೆ. ನಮ್ಮ ಮನೆಯಲ್ಲಿ ನಡೆವ ಪ್ರತಿ ಕಾರ್ಯಕ್ರಮದಲ್ಲು ತಪ್ಪದೆ ಹಾಜರಿರುತ್ತಿದ್ದರು. ಒಂದು ತರ ಸ್ವಂತ ಅಜ್ಜಿಯಂತೆ ನಮಗೆ. ಅಮ್ಮ ಅಪ್ಪನಿಗೂ ಹಾಗೆ, ಅಮ್ಮನಂತೆ. ಯಾವಗಲೂ ಮುಗುಳ್ನಗುತ್ತಾ, ತಾನಾಯಿತು, ತನ್ನ ಕೆಲಸವಾಯಿತು, ಜಪ-ತಪ ಬಿಟ್ಟರೆ ಬೇರೆ ಪ್ರಪಂಚವಿರಲಿಲ್ಲ. ಬಾಗಿಲಲ್ಲಿ ಎತ್ತರದ ನಾಯಿ ಇತ್ತು, ಹೊಸ ಪರಿಚಯ. ಅಷ್ಟರಲ್ಲಿ, ಗಪ್ಪತಿ ಮಾವ, ಬಂದ. 'ಅರೆ!!, ಈಗ ಬಂದೆ? ಆರಾಮ? ಕುಡಿಯಲೆ ಎನು ತಗತ್ತೆ' ಕೇಳಿದ. ನನಗೆ ಅಲ್ಲಿ ಸುಮ್ಮನೆ ತೊಂದರೆ ಕೊಡುವ ಇರಾದೆ ಇರಲಿಲ್ಲ. 'ಸಾವಿತ್ರಮ್ಮ ಎಲ್ಲಿ ಎಂದೆ?' 'ಅದಕ್ಕೆ ಸಮಾ ಆರಮಿಲ್ಲೆ, ಮಲ್ಗಿದ್ದು ಕೋಲಿಲಿ. ಈಗಷ್ಟೆ ಗುಳ್ಗೆ ಕೊಟ್ಟಿ. ತಗ ಮಲ್ಗಿದ್ದು' ಎಂದ. ನನಗೆ ಅವರ ಮುಖ ನೋಡುವ ಹೊರತು ಮತ್ತೇನು ಮನಸ್ಸಿರಲಿಲ್ಲ. ಅವರು ಅಲ್ಲಿಂದಲೆ, 'ತಮ್ಮಾ ಯಾರು' ಎಂದು ಕನವರಿಸಿದರು.'ನಾನು ಅಜ್ಜಿ' ಎನ್ನುತ್ತಾ ಅವರು ಮಲಗಿದ್ದಲ್ಲಿಗೆ ಹೋದೆ. 'ಅಯ್ಯೋ ತಂಗಿ, ಕಣ್ಣ ದ್ರುಷ್ಟಿನೆ ಇಲ್ಯೆ..., ಗೊತ್ತೆ ಆಯ್ದಿಲ್ಲೆ ಸುಳ್ಳಾ...ನೀ ಬಂದು ಮಾತಾಡ್ಸದಂತು ಗೊತ್ತೆ ಆಗ್ತಿಲ್ಲೆ, ದೃಷ್ಟಿ ಪೂರ್ತಿ ಮಂದಾಗೋಯ್ದು, ಆ ಭಗ್ವಂತಾದ್ರು ಎಷ್ಟು ಆಯುಸ್ ಬರ್ದಿಗಿದ್ನನ, ...
Comments
Post a Comment