ಬರವಣಿಗೆ, ಒಂದು ಸುಂದರ ಅನುಭವ. ವರ್ಷಗಳೇ ಕಳೆದು ಹೋಗಿತ್ತು, ಮನಸ್ಸಿಟ್ಟು ಬರೆಯದೆ. ನನಗೆ ಬರವಣಿಗೆಯ ಜೊತೆ ಒಂದಿಷ್ಟು ಒಳ ಒಪ್ಪಂದ ಇದೆ. ಯಾವುದೇ ರೀತಿಯ ಹೊರ ಪ್ರಪಂಚದ ಪ್ರಭಾವ ಬೀರದೆ, ಬಹುಮುಖ್ಯವಾಗಿ ಸಾಮಾಜಿಕ ಜಾಲತಾಣ, ಸಿನಿಮಾ, ಯಾರೋ ಬರೆದ ಸಾಲುಗಳು... ಹಾಗಂತ ಮುಖತಃವಾಗಿ ಪರಿಚಯವಾದ ಪ್ರತಿಯೊಂದು ವ್ಯಕ್ತಿ, ಜೀವಿ, ವಸ್ತು, ಸಂಗತಿಗಳಲ್ಲಿ ಜೀವಿಸ ಬಯಸುತ್ತೇನೆ. ಬಹುಶಃ ನಾವು ಜೀವನ ಪೂರ್ತಿ ಯಾವುದೋ ಸಂಕೋಲೆಯ ಸಂತೆಯಲ್ಲಿ ಕಳೆದುಹೋದ ನಮ್ಮನ್ನು ಹುಡುಕುತ್ತಿರುತ್ತೇವೆ. ಅನುಭವದಿಂದ ಮಾಗಿದ ಮನಸ್ಸಿಗೆ ಆ ಹಳೆಯ ನಾವು ಕಂಡರೂ ಕಾಣದಂತೆ ಮಾಡಿ ಹೊಸ ಅಂಗಿ ತೊಟ್ಟ ನಮ್ಮನ್ನೇ ಅಪ್ಪಿಕೊಳ್ಳುವುದು, ಆದರೆ ಹುಡುಕಾಟ ನಿರಂತರ. ಬಹುಶಃ ಈ ಲೌಕಿಕ ಜಗತ್ತಿನಲ್ಲಿ ಇರುವಾಗ, ಇದಕ್ಕೂ ಆಳಕ್ಕಿಳಿದರೆ ಅಪಾಯವೇ ಸರಿ. ನಾನು ಭಗವದ್ಗೀತೆಯಲ್ಲಿ ನಂಬಿದ ಸಾಲುಗಳೆಂದರೆ ನಮಗೆ ಸೇರಬೇಕಾಗಿದ್ದು ನಮಗೆ ಸೇರಿಯೇ ತೀರುವುದು. ಪ್ರಯತ್ನ ಇರಬೇಕು ಅಷ್ಟೇ. ಇದ್ದ ಕೆಲಸ ಬಿಟ್ಟಿದ್ದೆ, ಮುಂದೆ ಏನು ಎಂಬ ಚಿಂತೆ ಮನೆಯಲ್ಲೇ ಬಿಟ್ಟು ಬೀಗ ಹಾಕಿ ಹೊರಟಿದ್ದೆ. ಹೊರಟ ಪಯಣ ಸುಲಭವಿರಲಿಲ್ಲ. ಬಹಳ ದಿನಗಳ ನಂತರ ತಿರುಗಲು ಹೊರಟಿದ್ದೆ. ಕೊನೆಯ ಕ್ಷಣದಲ್ಲಿ ಆದ ಬದಲಾವಣೆಯಿಂದ ಮನೆಯಿಂದ ಹೊರ ಬೀಳಲು ಮನಸ್ಸಿರಲಿಲ್ಲ. ಪ್ರತಿ ಬಾರಿ ನನ್ನ ಸ್ನೇಹಿತರ ಗುಂಪು ಪ್ರವಾಸದ ಬಗ್ಗೆ ಹೇಳಿದಾಗ ಏನೋ ಕುಂಟು ನೆಪ ಹೇಳಿ ತಪ್ಪಿಸಿಕೊಳ್ಳುವೆ ಎಂಬ ಅಪವಾದ ನನ್ನ ಮೇಲಿತ್ತು. ಈ ಬಾರಿ ಏನು ಯೋಚಿಸ...
ನಿನ್ನ ಬಿಂಬ...
ಯಾಕೊ ತುಂಬಾನೇ ನೆನಪು ಆಗ್ತಿದೀಯ. ಒಮ್ಮೆ ಅಮ್ಮನ ಮಾತು ಕೇಳಿ ಎದೆ ಬಡಿತ ನಿಂತಂತಾಯಿತು. ಅಮ್ಮ ಫೋನ್ ಲಿ ಹೇಳಿದ್ದಕ್ಕೆ ಬಚಾವ್! ಎದುರೇ ಇದ್ದರೆ ನನ್ನ ವರ್ತನೆ ಅವಳಿಗೆ ಅವಳ ಹಳೆಯ ಪ್ರಶ್ನೆಗಳಿಗೆ ಮರುಜೀವ ಬಂದು ಹುಬ್ಬುಗಳ ಮಧ್ಯೆ ನಿಲ್ಲುತ್ತಿತ್ತು. ಅಮ್ಮ ಮತ್ತಿನ್ನೇನೋ ಹೇಳುತ್ತಿದ್ದಳು. ನಾನು ನೆಪ ಮಾತ್ರಕೆ ಹಾಹುಂ ಎನ್ನುತ್ತಿದ್ದೆ. ಒಮ್ಮೆ ಮೈ ಎಲ್ಲಾ ಬೆವರಿತು. ಕಣ್ಣಂಚು ಒದ್ದೆಯಾಯಿತು. ನಾನು ಅಷ್ಟೊಂದು ಅವನನ್ನು ಹಚ್ಚಿ ಕೊಂಡಿದ್ದೆನೆ.. ನನಗೆ ಅಚ್ಚರಿ, ಎಲ್ಲಾ ಕಳೆದುಕೊಂಡ ಅನುಭವ. ಮೊನ್ನೆ ಅವನು ಹೇಳಿದ್ದು ತಮಾಷೆಯಲ್ಲಾ ಹಾಗಾದರೆ... 'ಮಳೆ ಜೋರು ಸುರಿತಿದೆ, ನೀರಿನ ಶಬ್ದ, ನೀ ಹೇಳೊದು ಏನು ಕೇಳಿಸ್ತಿಲ್ಲಾ, ಗುಡ್ ನೈಟ್', ಎಂದು ಅಮ್ಮ ಫೋನಿಟ್ಟರು. ನಾನು ಅದಕ್ಕೇ ಕಾದಿದ್ದೆ.ನಾನು ನೆನಪುಗಳ ಮೊರೆತಕ್ಕೆ ಸಿಕ್ಕಿದ್ದೆ, ಏನೂ ಕೇಳದಾಗಿತ್ತು. ನಮ್ಮದು ಅದು ಮೊದಲ ಹಾಗೂ ಕೊನೆಯ ಮುಖತಃ ಭೇಟಿ ಅಲ್ಲವಾ?? ನಾನಾಗ ಚಿಕ್ಕ ಮಗುವೇನಾಗಿರಲಿಲ್ಲ. ಹದಿನೆಂಟರಲ್ಲಿದ್ದೆ‌. ಜಗತ್ತೇ ಬಲು ಸುಂದರವಾಗಿ ಕಾಣುವ ಕಾಲ. ಜೊತೆಗೆ ಯಾವಾಗಲೂ ಕಾಡುವ ಅತ್ತೆಯ ಮಾತು ನನ್ನನ್ನು ಸ್ವಪ್ನ ನಗರಿಯಲ್ಲಿ ಸುತ್ತುವಂತೆ ಮಾಡಿತು. ನೀ ನನ್ನನ್ನ ಮೊದಲ ಬಾರಿಗೆ ನೋಡಿದ ನೋಟ ಇನ್ನೂ ಎದೆಯಲ್ಲಿ ಲಘು ಕಂಪನ ಹುಟ್ಟಿಸುತ್ತದೆ. ಅಲ್ಲಿ ನಡೆದ ಪ್ರತಿ ಘಟನೆ ಕಾಕತಾಳೀಯವೋ ನನ್ನ ಕಲ್ಪನೆಯೋ ಇನ್ನೂ ಉತ್ತರ ಸಿಗಲಿಲ್ಲ. ನೀ ನನ್ನನ್ನೇ cameraದಲ್ಲಿ ಸೆರೆಹಿಡಿಯುತ್ತಿರುವಂತೆ ಭಾಸವಾಗುತ್ತಿತ್ತು. ಕಣ್ಣುಗಳೋ ಹುಚ್ಚರಂತೆ ಹಾದಿ ಬೀದಿ ಸುತ್ತಿ ನಮ್ಮಿಬ್ಬರ ಕಣ್ಣ ಬಾಗಿಲಿಗೆ ಪದೆ ಪದೇ ಅಡಿ ಇಡುತ್ತಿದ್ದವು. ವಿದಾಯ ಹೇಳುವಾಗ ಕಣ್ಣು ತುಂತುರಿಸಿತ್ತು. ಎಲ್ಲರೂ ಅಮ್ಮನನ್ನು ಬಿಟ್ಟು ಹೊರಟಿದ್ದಕ್ಕೆ ಎಂದುಕೊಂಡಿದ್ದರು. ಕಾರಣ ಹೃದಯಕ್ಕೆ ತಿಳಿದಿತ್ತಾ ಇದೇ ಕೊನೆ ಭೇಟಿ ಎಂದು?? ಬಳಿಕ ಫೋನ್ ನಿಂದ ನಮ್ಮಿಬ್ಬರ ಸಂದೇಶರವಾನೆ ನಡೆಯುತ್ತಿತ್ತು. ಹೆಚ್ಚಾಗಿ ಕಿತ್ತಾಡುತ್ತಿದ್ದೆವು. ಈಗೀಗ ನಿನ್ನ ನೆನಪು ಕೆಟ್ಟದಾಗಿ ಕಾಡುತ್ತಿದೆ. ಹೇಳಬೇಕಾದ ಸಮಯದಲ್ಲಿ ಹೇಳಲಿಲ್ಲ. ಹೇಳಬೇಕೆಂದಾಗ ನಿನ್ನ ಸ್ಥಾನ ಮಾನಕ್ಕೆ ಮಣೆ ಎಂದುಕೊಂಡರೆ ಎಂದು ದೂರವಿದ್ದೆ.ನಿನ್ನ ಮೇಲೆ ಇಟ್ಟ ಭರವಸೆ ಹೆಚ್ಚಾಯಿತು ಬಹುಶಃ.. ಹೇಳದೆಯೇ ಅರಿವುದು ಕೇವಲ ಕಾಲ್ಪನಿಕ. ನೀ ಬರುವೆ ಎಂದು ಕಾದಿಹೆ, ಈಗಲೂ ಹುಚ್ಚು ಬಯಕೆ, ನೆನಸಿಕೊಂಡಾಗಲೆಲ್ಲ ಅವ್ಯಕ್ತ ಕಂಪನ.. ಕಣ್ಣಾಲಿ ತುಂಬುವುದು,ಎದೆಯಲ್ಲಿ ಒಂದು ರೀತಿಯ ನೋವು, ಒಮ್ಮೆಲೆ ನುಗ್ಗಿ ಬರುವ ಕೋಪ. ಜೀವನ ಪೂರ್ತಿ ನಿನ್ನ ನೆನಪಲ್ಲೆ ಕಳೆವಾಸೆ. ಆ ನಾಟಕಗಾರನಿಗೆ ಮರುಗ ಬೇಡ ಎಂದು ಗದರಿದಾಗಲೆಲ್ಲ ಚಿಕ್ಕ ಮಗುವಂತೆ ಅಳುವುದು, ಹೇಗೆ ಸುಮ್ಮನಿರಿಸಲಿ....
ರಾಧೆ...🎶

Comments

Popular posts from this blog